ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ವಕ್ವಾಡಿಯ ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ಬಣ್ಣಗಳ ದಿನವನ್ನು ವಿಜೃಂಭಣೆಯಿಂದ ಆಚರಿಸಿದರು.ರಂಗಿ ತರಂಗದ ವಿಷಯವನ್ನಾದರಿಸಿ ಕಟ್ಟಡವನ್ನು ರಂಗುರಂಗಾಗಿ ಅಲಂಕರಿಸಲಾಗಿತ್ತು. ಮಕ್ಕಳೆಲ್ಲರೂ ಬಣ್ಣಬಣ್ಣದ ಉಡುಪುಗಳಲ್ಲಿ ರಂಜಿಸುತ್ತಿದ್ದರು.ಶಿಕ್ಷಕಿಯರು ಬಣ್ಣಗಳ ವಿಧಗಳಾದ ಪ್ರಾಥಮಿಕ,ಮಾಧ್ಯಮಿಕ ಮತ್ತು ನೈಸರ್ಗಿಕ ಬಣ್ಣಗಳ ಬಗ್ಗೆ ವಸ್ತುಸಮೇತ ಸಾದೃಶ್ಯವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಬಾಂಡ್ಯ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮ ಎಸ್.ಶೆಟ್ಟಿ ,ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಶಾಲ ಶೆಟ್ಟಿ ಹಾಗೂ ಎಲ್ಲಾ ಶಿಕ್ಷಕಿಯರೂ ಉಪಸ್ಥಿತರಿದ್ದರು.