Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಸದಾನಂದ ಉಪ್ಪಿನಕುದ್ರು ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಸದಾನಂದ ಶೇರುಗಾರ್ ಉಪ್ಪಿನಕುದ್ರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ನೇಮಕಗೊಳಿಸಿದ್ದಾರೆ.

ಸದಾನಂದ ಶೇರುಗಾರ್ ಅವರು ತಲ್ಲೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ, ಬಿಜೆಪಿ ತ್ರಾಸಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಹಾಗೂ ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿಯ ಪ್ರಧಾನ ಸಮಿತಿಯ ಕಾರ್ಯದರ್ಶಿಯಾಗಿ ಮತ್ತು ಪಕ್ಷದಲ್ಲಿ ತಳಮಟ್ಟದಿಂದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ.

Exit mobile version