Kundapra.com ಕುಂದಾಪ್ರ ಡಾಟ್ ಕಾಂ

ರೋಟರಿ ಕ್ಲಬ್ ಕುಂದಾಪುರ ವತಿಯಿಂದ ಹಿರಿಯ ಸಾಹಿತಿ ಯು.ಸಿ ಹೊಳ್ಳರಿಗೆ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಹಿತ್ಯ, ಸಾಮಾಜಿಕ, ಧಾರ್ಮಿಕ ಮುಂತಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ತಮ್ಮದೇ ಆದ ಛಾಪು ಮೂಡಿಸಿರುವ ಉಪ್ಪುಂದ ಚಂದ್ರಶೇಖರ ಹೊಳ್ಳರ ಕುರಿತಾಗಿ ‘ಉಪ್ಪುಂದದ ಹೊಳಪು’ ಅಭಿನಂದನಾ ಗ್ರಂಥ ಬಿಡುಗಡೆಗೊಂಡ ಸುಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅವರ ಅನುಪಮ ಸೇವೆಯನ್ನು ಸ್ಮರಿಸಿ ಕುಂದಾಪುರ ರೋಟರಿ ಕ್ಲಬ್ ವತಿಯಿಂದ ಹೊಳ್ಳರ ಸ್ವಗೃಹ ‘ಬೆಳ್ಳಿರಥ’ದಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಿಟಕಪೂರ್ವಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಕಾರ್ಯದರ್ಶಿ ಸಾಲ್ಗದ್ದೆ ಶಶಿಧರ ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಸಂತೋಷ ಕೋಣಿ, ಸಾರ್ಜಂಟ್ ಅಟ್ ಆರ್ಮ್ ಸಂತೋಷ ಕುಮಾರ್ ಶೆಟ್ಟಿ ನೂಜಾಡಿ ಹಾಗೂ ಕುಂದಾಪ್ರ ಡಾಟ್ ಕಾಂ ಸಂಪಾಕದ ಸುನಿಲ್ ಹೆಚ್. ಜಿ. ಬೈಂದೂರು ಉಪಸ್ಥಿತರಿದ್ದರು.

Exit mobile version