Kundapra.com ಕುಂದಾಪ್ರ ಡಾಟ್ ಕಾಂ

ಹೆತ್ತವರ ಪ್ರೀತಿ ಸಿಗಲಿಲ್ಲವೆಂದು ಮಗಳು ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತನ್ನ ಪೋಷಕರ ಪ್ರೀತಿ ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದ ಯುವತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ವೆ ಗಣೇಶ್ ಶೆಟ್ಟಿ ಅವರ ಮಗಳು ಪ್ರಗತಿ (16) ಆತ್ಮಹತ್ಯೆಗೆ ಶರಣಾದ ಯುವತಿ.

ಬಿದ್ಕಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ಕಾಮರ್ಸ್ ವಿಭಾಗದಲ್ಲಿ ಕಲಿಯುತ್ತಿದ್ದ ಪ್ರಗತಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಶನಿವಾರ ಸಂಜೆ ಕಾಲೇಜಿನಿಂದ ಬಂದವಳು ಸಿಟ್ಟಿನಿಂದ ಸೀದಾ ತನ್ನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಈ ಹಿಂದೆಯೂ ಹಲವು ಬಾರಿ ಹೀಗೆಯೇ ಮಾಡಿದ್ದರಿಂದ ಅದನ್ನು ಅಷ್ಟಾಗಿ ಗಂಭೀರವಾಗಿ ಪರಿಗಣಿಸದ ಪೋಷಕರು ಮರುದಿನ ಬೆಳೆಗ್ಗೆಯಾದರೂ ತನ್ನ ರೂಮಿನಿಂದ ಹೊರಬರದಿದ್ದಾಗ ಆತಂಕಗೊಂಡು ಬಾಗಿಲು ತೆರೆದು ನೋಡಿದಾಗ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿವುದು ಗಮನಕ್ಕೆ ಬಂದಿತ್ತು.

ಡೆತ್‌ನೋಟ್‌ನಲ್ಲಿ ತನ್ನ ಪೋಷಕರು ತನ್ನನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿಲ್ಲ. ಹಾಗಾಗಿ ನೊಂದಿದ್ದೇನೆ ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ಶ್ರೀಕಾಂತ, ಕೋಟ ಠಾಣಾಧಿಕಾರಿ ಕಬ್ಬಾಳ್‌ರಾಜ್ ಹಾಗೂ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version