Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ದೇವಳಕ್ಕೆ ನಟ ಪ್ರಕಾಶ್ ರೈ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಚಿತ್ರ ನಟ, ನಿರ್ದೇಶಕ, ಪ್ರಕಾಶ್ ರೈ ದಂಪತಿಗಳು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ನಂತರ ಚಂಡಿಕಾಹೋಮ ಸೇವೆ ನೆರವೇರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್. ಕೃಷ್ಣಮೂರ್ತಿ ದೇವಳದ ವತಿಯಿಂದ ರೈ ದಂಪತಿಗಳನ್ನು ಗೌರವಿಸಿದರು. ಈ ಸಂದರ್ಭ ಉದ್ಯಮಿ ವಾಸುದೇವ ಶೆಟ್ಟಿ ದಂಪತಿಗಳು ರೈ ಕುಟುಂಬದ ಜತೆಗಿದ್ದರು .

Exit mobile version