Kundapra.com ಕುಂದಾಪ್ರ ಡಾಟ್ ಕಾಂ

ನಾಡ ಪಡುಕೋಣೆಗೆ ಪ್ರತ್ಯೇಕ ಸರ್ಕಾರಿ ಬಸ್ ಓಡಿಸಲು ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಾಡ ಪಡುಕೋಣೆಗೆ ಪ್ರತ್ಯೇಕ ಸರ್ಕಾರಿ ಬಸ್‌ಗಳನ್ನು ಓಡಿಸಿ ಜನಸಾಮಾನ್ಯರಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಹಾಗೂ ಮಾರಸ್ವಾಮಿಯಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳನ್ನು ಹಾಗೂ ಸರ್ಕಾರಿ ಬಸ್‌ಗಳನ್ನು ನಿಲುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪಡುಕೋಣೆಯಲ್ಲಿ ಸಹಿ ಸಂಗ್ರಹ ಚಳುವಳಿಯನ್ನು ಆರಂಭಿಸಲಾಯಿತು. ಡಿವೈಎಫ್‌ಐನ ಮಾಜಿ ಮುಖಂಡರಾದ ರಾಜೀವ ಪಡುಕೋಣೆ ಸಹಿ ಸಂಗ್ರಹ ಚಳುವಳಿಯನ್ನು ಉದ್ಘಾಟಿಸಿದರು. ಡಿವೈಎಫ್‌ಐನ ತಾಲೂಕು ಉಪಾಧ್ಯಕ್ಷರಾದ ಸುರೇಶ ಕಲ್ಲಾಗರ, ಡಿವೈಎಫ್‌ಐನ ಅಧ್ಯಕ್ಷರಾದ ಸುಬ್ರಹ್ಮಣ್ಯ ಆಚಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version