Kundapra.com ಕುಂದಾಪ್ರ ಡಾಟ್ ಕಾಂ

ಕರಾವಳಿ ಜಿಲ್ಲೆಗಳಲ್ಲಿ ನಕಲಿ ಗೋರಕ್ಷಕರ ಉಪಟಳ ನಿಯಂತ್ರಿಸಿ: ಡಿವೈಎಫ್‌ಐ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿಯನ್ನು ಹತ್ಯೆಗೈದಿರುವುದನ್ನು ಖಂಡಿಸಿ, ಉಭಯ ಕರಾವಳಿ ಜಿಲ್ಲೆಗಳಲ್ಲಿ ಗೋರಕ್ಷರ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿಗೆ ಮುಂದಾಗುವವರನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ಕುಂದಾಪುರ ತಾಲೂಕು ಸಮಿತಿ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಡಿವೈಎಫ್ ಮಾಜಿ ಮುಖಂಡ ಎಚ್. ನರಸಿಂಹ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಡಿವೈಎಫ್‌ಐ ತಾಲೂಕು ಅಧ್ಯಕ್ಷ ಸಂತೋಷ ಹೆಮ್ಮಾಡಿ, ಉಪಾಧ್ಯಕ್ಷ ಸುರೇಶ್ ಕಲಾಗರ್, ರವಿ.ವಿ.ಎಂ, ರಾಜಾ ಬಿ.ಟಿ.ಆರ್, ಅಕ್ಷಯ ವಡೇರಹೋಬಳಿ, ಗಣೇಶ್ ಕಲ್ಲಾಗರ, ಅಶೋಕ ಹಟ್ಟಿಯಂಗಡಿ, ಸತೀಶ ತೆಕ್ಕಟ್ಟೆ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Exit mobile version