Kundapra.com ಕುಂದಾಪ್ರ ಡಾಟ್ ಕಾಂ

ಹಟ್ಟಿಯಂಗಡಿ ಕ್ಷೇತ್ರದಲ್ಲಿ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾಗಣಯಾಗ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಟ್ಟಿಯಂಗಡಿ : 1008ತೆಂಗಿನ ಕಾಯಿ ಮಹಾಗಣಪತಿ ಹವನ, 108 ಶ್ರೀ ಸತ್ಯಗಣಪತಿ ವ್ರತ ಸಂಪನ್ನ
ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು.

ಸೆ.5ರಂದು ಶ್ರೀ ಮಹಾಗಣಪತಿ ಹೋಮ ಸಂಕಲ್ಪ, ೧೦೦೮ ತೆಂಗಿನ ಕಾಯಿ ಮಹಾಗಣಪತಿ ಹವನದ ಪೂರ್ಣಾಹುತಿ, ಮಹಾ ಪೂಜೆ ವಿದ್ಯುಕ್ತವಾಗಿ ಋತ್ವಿಜರ ವೇದ ಮಂತ್ರಘೋಷಗಳೊಂದಿಗೆ ದೇವಳದ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ರಾತ್ರಿ ರಂಗಪೂಜಾದಿ ಸೇವೆಗಳು ಜರುಗಿತು.

ಸತ್ಯಗಣಪತಿ ವ್ರತ : ಸೆ. 6ರಂದು 108 ಶ್ರೀ ಸತ್ಯಗಣಪತಿ ವ್ರತ ಹಾಗೂ ಕಥಾ ನಿರೂಪಣೆ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಭಕ್ತರ ಅನುಕೂಲಕ್ಕಾಗಿ ಆಡಳಿತ ಮಂಡಳಿ ಉತ್ತಮ ವ್ಯವಸ್ಥೆಯನ್ನು ರೂಪಿಸಿತ್ತು. ನೂಕುನುಗ್ಗಲುಗಳಿಲ್ಲದೆ ಭಕ್ತರು ಸಾಂಗವಾಗಿ ಶ್ರೀ ದೇವರ ದರ್ಶನ ಪಡೆದರು. ಸಂಜೆ ನೃತ್ಯ ವಸಂತ ನಾಟ್ಯಾಲಯ ಕುಂದಾಪುರದವರಿಂದ ನೃತ್ಯ ವೈವಿಧ್ಯ, ನೃತ್ಯ ರೂಪಕ ಕಲಾತ್ಮಕವಾಗಿ ಮೂಡಿ ಬಂದವು.

Hattiyangadi Siddivinayaka Temple - Chouthi Special (3)

Exit mobile version