Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಸಿಟಿ ಪಾಯಿಂಟ್ – ನಮ್ಮ ಬಜಾರ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಮುಖ್ಯರಸ್ತೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಸಿಟಿ ಪಾಯಿಂಟ್ ಕಟ್ಟಡ ಹಾಗೂ ಹೈಪರ್ ಎಸಿ ಮಾರ್ಕೆಟ್ ನಮ್ಮ ಬಜಾರ್ ಲೋಪಾರ್ಪಣೆಗೊಂಡಿತು.

ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಲೋಕಾರ್ಪಣೆಗೊಳಿಸಿದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಯಚೂರಿನ ಸಿ.ಎ ಹಾಗೂ ಉದ್ಯಮಿ ಯು ರಾಮಚಂದ್ರ ಪ್ರಭು ಶುಭಶಂಸಗೈದರು. ನಮ್ಮ ಬಜಾರ್ – ಸಿಟಿ ಪಾಯಿಂಟ್ ಪ್ರವರ್ತಕ, ಶ್ರೀ ಮೂಕಾಂಬಿಕಾ ಡೆವೆಲಪರ‍್ಸ್‌ನ ಕೆ. ಸ್ವಾಗತಿಸಿ, ವೆಂಕಟೇಶ ಕಿಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಾದೂಗಾರ ಓಂಗಣೇಶ್ ಉಪ್ಪುಂದ ನಿರೂಪಿಸಿದರು.

 

Exit mobile version