ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದು ಜ್ಞಾನಸ್ಫೋಟದ ಯುಗದಲ್ಲಿ ನಾವಿದ್ದೇವೆ. ಈ ಜ್ಞಾನವನ್ನು ಸಮಾಜಕ್ಕೆ ಕೊಡಬೇಕಾದಲ್ಲಿ ಇಂದಿನ ಯುವ ಜನಾಂಗದ ಕರ್ತವ್ಯ. ಈ ನಿಟ್ಟಿನಲ್ಲಿ ಜ್ಞಾನವಂತರಾಗಿ ಬೆಳೆಯಬೇಕು ಎಂದು ಕೋಣಿ ಶಿವಾನಂದ ಕಾರಂತರು ಹೇಳಿದರು.
ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಶ್ರೀ ಕಾರಂತರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ, ಜ್ಞಾನಾರ್ಜನೆಯಿಂದ ಮಾತ್ರ ಉತ್ತಮ ಸಮಾಜದ ಸೃಷ್ಟಿ ಸಾಧ್ಯವಿದೆ ಎಂದರು.
ನಿವೃತ್ತ ಪ್ರಾಂಶುಪಾಲ, ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಹಿರಿಯ ಉಪನ್ಯಾ ರಮಾಕಾಂತ ರೇವಣ್ಕರ್ ಶೈಕ್ಷಣಿಕ ವರ್ಷದ ಎಲ್ಲಾ ಸಕಲ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ನಾಗೇಶ್ ಶಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು.