Kundapra.com ಕುಂದಾಪ್ರ ಡಾಟ್ ಕಾಂ

ಜೀಸಿ ಚಂದ್ರಕಾಂತ್ ಅವರಿಗೆ ಕಮಲ ಪತ್ರ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಕೊನೆಯ ದಿನ ಜೇಸಿಐ ಕುಂದಾಪುರ ಸಿಟಿಯ ನಿಕಟಪೂರ್ವಾಧ್ಯಕ್ಷ ಚಂದ್ರಕಾಂತ್ ಅವರು ಜೇಸಿ ಸಂಸ್ಥೆಗೆ ನೀಡಿದ ಅನುಪಮ ಸೇವೆಯನ್ನು ಸ್ಮರಿಸಿ ಕಮಲ ಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಅಧ್ಯಕ್ಷ ಕುಂಭಾಸಿ ಮಂಜುನಾಥ ಕಾಮತ್, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜೇಸಿ ಪೂರ್ವಾ ವಲಯಾಧ್ಯಕ್ಷರಾದ ಅನಿಲ್ ಕುಮಾರ್, ವೈ. ಸುಕುಮಾರ್, ಕೃಷ್ಣಮೋಹನ್ ಪಿ. ಎಸ್, ಉದ್ಯಮಿಗಳಾದ ಆನಂದ ಕುಂದರ್, ಮಹಮ್ಮದ್ ಮೌಲ, ಜೇಸಿ ವಲಯ ಉಪಾಧ್ಯಕ್ಷ ನಿತಿನ್ ಅವಭೃತ, ಪೂರ್ವಾಧ್ಯಕ್ಷರಾದ ಕೆ. ಕಾರ್ತಿಕೇಯ ಮಧ್ಯಸ್ಥ, ಸಪ್ತಾಹ ಸಭಾಪತಿಗಳಾದ ಹುಸೇನ್ ಹೈಕಾಡಿ, ರಾಘವೇಂದ್ರ ಚರಣ ನಾವಡ, ಪೂರ್ವಾಧ್ಯಕ್ಷರಾದ ನಾಗೇಂದ್ರ ಪೈ, ವೆಂಕಟೇಶ ಪ್ರಭು, ಕಾರ್ಯದರ್ಶಿ ಗೌತಮ್ ನಾವಡ, ಜೇಸಿರೆಟ್ ಅಧ್ಯಕ್ಷೆ ಪುಷ್ಪಾ ಶೇಟ್, ಜ್ಯೂ.ಜೇಸಿ ಅಧ್ಯಕ್ಷ ಸ್ವಪ್ನಿಲ್ ತಂಕಪ್ಪನ್, ಯೋಜನಾಧಿಕಾರಿ ರಾಘವೇಂದ್ರ ಭಟ್, ಪ್ರಶಾಂತ್ ಹವಲ್ದಾರ್ ಇನ್ನಿತರರು ಉಪಸ್ಥಿತರಿದ್ದರು.

Exit mobile version