Kundapra.com ಕುಂದಾಪ್ರ ಡಾಟ್ ಕಾಂ

ಕೋಟೇಶ್ವರ: ಉದ್ಯೋಗ ಮಾರ್ಗದರ್ಶನ ಹಾಗೂ ಸಾಹಿತ್ಯ ಪ್ರದರ್ಶನ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚೆಚ್ಚು ಅವಿಷ್ಕಾರಗಳಿಂದ ಕೊಡಿರುವುದರಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಸಾರ್ವಜನಿಕ ಹುದ್ದೆಗಳಿಗೆ ಸ್ಪರ್ಧಿಸಿ ಹುದ್ದೆಗಿಟಿಸಿಕೊಳ್ಳುವ ಸಲುವಾಗಿ ಉದ್ಯೋಗದ ಬಗ್ಗೆ ಕೆಲವೂಂದು ಮಾಹಿತಿಗಳನ್ನು ತಿಳಿದುಕೊಂಡು ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮಾರ್ಗದರ್ಶನ ಶಿಬಿರಗಳ ಭಾಗವಹಿಸಿ ಸಂಪೂರ್ಣ ಪ್ರಯೋಜವನ್ನು ಪಡೆದುಕೊಂಡಾಗ ಮಾತ್ರ ವಿದ್ಯಾರ್ಥಿಗಳು ಸಮಾಜದಲ್ಲಿ ಯಶ್ವಸಿಯಾಗಲು ಸಾಧ್ಯ ಎಂದು ಜೀವ ವಿಮಾ ನಿಗಮದ ಅಧಿಕಾರಿ ಶಂಕರ ಐತಾಳ್ ಹೇಳಿದರು.

ಅವರು ಕೋಟೇಶ್ವರ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ ಮಂಗಳೂರು ವಿಶ್ವ ವಿಧ್ಯಾನಿಲಯ, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಹಾಗೂ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರ ಪ್ರಥರ್ಮ ದರ್ಜೇ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉದ್ಯೋಗ ಮಾರ್ಗದರ್ಶನ ಹಾಗೂ ಸಾಹಿತ್ಯ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಸಭೆಯ ಅಧ್ಯಕ್ಷತೆ ವಹಿಸಿದರು. ಉಜಿರೆ ಎಸ್.ಡಿ.ಎಮ್. ಕಾಲೇಜಿ ಇಂಗ್ಲಿಷ್ ಪಿ,ಜಿ. ವಿಭಾಗ ಪ್ರೊ.ಮಾಧವ ಭಟ್, ಮತ್ತು ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉದ್ಯೋಗಾಧಿಕಾರಿ ಎಸ್.ಡಿ.ಬಸವರಾಜು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ವೃತ್ತಿ ಮಾರ್ಗದರ್ಶನ ಮತ್ತು ಸ್ಥಾನೀಕರಣ ಘಟಕ ಸಂಚಾಲಕ ಎ. ಸುಬ್ರಹ್ಮಣ್ಯ , ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜೆ.ಎಸ್. ಉಷಾದೇವಿ ಉಪಸ್ಥಿತರಿದರು, ಸನತ್ ಕುಮಾರ ಸ್ವಾಗತಿಸಿ, ರವಿಗೌಡ ಕಾರ್ಯಕ್ರಮ ನಿರೂಪಿಸಿ,ಕಿರಣ್ ವಂದಿಸಿದರು.

Exit mobile version