Site icon Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟ: ಪ್ರಥ್ವೀನ್ ಗಾಣಿಗಗೆ ಬೆಳ್ಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಥ್ವೀನ್ ಆರ್. ಗಾಣಿಗ ಇವರು ಬೆಳ್ಳಿ ಪದಕ ಪಡೆದಿರುತ್ತಾರೆ. ಇವರು ಕೊಲ್ಲೂರಿನ ರಮೇಶ್ ಗಾಣಿಗ ಮತ್ತು ನಯನ ಆರ್. ಗಾಣಿಗರವರ ಪುತ್ರನಾಗಿದ್ದು, ಇವರಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ತರಬೇತಿ ನೀಡಿರುತ್ತಾರೆ.

Exit mobile version