Kundapra.com ಕುಂದಾಪ್ರ ಡಾಟ್ ಕಾಂ

ಸ್ವಾತಂತ್ರ್ಯದ ನೆನಪುಗಳು ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ‘ಸ್ವಾತಂತ್ರ್ಯದ ನೆನಪುಗಳು’ ಎಂಬ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಾವುಂದ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಗಣೇಶ್ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ಪ್ರೊ.ಬಿ.ಎ ಮೇಳಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಉಮೇಶ್ ಮಯ್ಯ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕರಾದ ಕುಮಾರಿ ಶರಾವತಿ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರಾದ ವಿಘ್ನೇಶ್ವರ ವಂದಿಸಿದರು. ವಿದ್ಯಾರ್ಥಿನಿ ಪಿ.ಜಿ ಚೈತನ್ಯ ತೃತೀಯ ಬಿ.ಎ ಕಾರ್ಯಕ್ರಮ ನಿರೂಪಿಸಿದರು.

Exit mobile version