Kundapra.com ಕುಂದಾಪ್ರ ಡಾಟ್ ಕಾಂ

ಪಾರ್ವತಿ ಜಿ. ಐತಾಳ್ ಅವರಿಗೆ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನದ ಸಾಹಿತ್ಯ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಂಡಾರ್‌ಕಾರ್ಸ್ ಕಾಲೇಜಿನ ಇಂಗ್ಲೀಷ್ ವಿಭಾಗ ಮುಖ್ಯಸ್ಥೆ, ಲೇಖಕಿ ಪಾರ್ವತಿ ಜಿ ಐತಾಳ್ ಅವರ ‘ಒಡಲ ಬೆಂಕಿ’ ಕಾದಂಬರಿಗೆ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್‌ನ ಸಾಹಿತ್ಯ ಪ್ರಶಸ್ತಿ ದೊರೆತಿದೆ.

ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾ ಗ್ರಾಮದ ಪುಲಕೇಶಿ ರಂಗಮಂದಿರದಲ್ಲಿ ಡಿ.೮ ರಿಂದ ೧೨ರ ತನಕ ೫ ದಿನಗಳ ಕಾಲ ನಡೆಯಲಿರುವ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ೮ನೇ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

ಕನ್ನಡ ಬರಹಗಾರ್ತಿಯರ ಪೈಕಿ ಪ್ರಮುಖರೆನಿಸಿಕೊಂಡಿರುವ ಪಾರ್ವತಿ ಜಿ. ಐತಾಳ ಅವರು ಈವರೆಗೆ ಕಥೆ, ಕವಿತೆ, ಕಾದಂಬರಿಗಳನ್ನು ಪ್ರಕಟಿಸಿರಲ್ಲದೇ, ಮಲಯಾಳಂ ಭಾಷೆಯ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

Exit mobile version