Kundapra.com ಕುಂದಾಪ್ರ ಡಾಟ್ ಕಾಂ

ಕೆಂಚನೂರು: ಪಿಯುಸಿ ವಿದ್ಯಾರ್ಥಿ ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನೆಂಪು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿಯೇ ನೆಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಹಟ್ಟಿಯಂಗಡಿ ಗ್ರಾಪಂ ಕೆಂಚನೂರು ನಿವಾಸಿ ಸೀನ ಎಂಬುವವರ ಪುತ್ರ ರಾಜೇಶ್ (16) ಮೃತ ದುರ್ದೈವಿ.

ನೆಂಪು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಯಾಗಿದ್ದ ರಾಜೇಶ್ ತನ್ನ ಮನೆಯವರ ಬಳಿ ಓದಿನಲ್ಲಿ ಆಸಕ್ತಿ ಇಲ್ಲ ಎಂದು ಹೇಳುತ್ತಿದ್ದ ಎನ್ನಲಾಗಿದೆ. ಕಳೆದ ನಾಲ್ಕು ದಿನಗಳಿಂದ ಮನೆಯಲ್ಲಿಯೇ ಇದ್ದ ಆತ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ರಾಜೇಶ್, ತಂದೆ ತಾಯಿ, ಓರ್ವ ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version