Kundapra.com ಕುಂದಾಪ್ರ ಡಾಟ್ ಕಾಂ

ಕೋಟೇಶ್ವರದಲ್ಲಿ ಕಾಶಿ ಮಠಾಧೀಶರ ಮೊಕ್ಕಾಂ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೋಟೇಶ್ವರ: ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಮೂರು ದಿನಗಳ ಮೊಕ್ಕಾಂಗೆ ತಾ ೧೬ ನವೆಂಬರ್‌ನಂದು ಕೇರಳದ ಕಾಂಜ್ಞಂಗಾಡಿನಿಂದ ಕೋಟೇಶ್ವರಕ್ಕೆ ಆಗಮಿಸಿದರು.

ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಯಿತು ನಂತರ ದೇವಾಲಯದ ವತಿಯಿಂದ ಪಾದಪೂಜೆ ಸೇವೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರು, ಊರ ಪರವೂರ ಸಮಾಜ ಬಾಂಧವರು ಉಪಸ್ಥಿತರಿದ್ದರು. ಸಂಜೆ ಚೈತನ್ಯ  ಕುಲಕರ್ಣಿ ಮುಂಬೈ ಇವರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ದೇವಸ್ಥಾನದಲ್ಲಿ ನಡೆಯಲಿದೆ.

Exit mobile version