Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ: ಪುಷ್ಪ ಸಿಂಧೂರಿ ಯಕ್ಷಗಾನದಲ್ಲಿ ಆಚಾರ್ಯದ್ವಯರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆ ಮಕ್ಕಿಗದ್ದೆ ಫೆಂಡ್ಸ್ ಸಂಯೋಜನೆಯಲ್ಲಿ ಶ್ರೀ ಪೆರ್ಡೂರು ಮೇಳದವರಿಂದ ಕುಂದಾಪುರ ತಾಲೂಕಿನಲ್ಲಿಯೇ ಮೊದಲು ಪ್ರದರ್ಶನ ಕಂಡ ಪುಪ್ಪಸಿಂಧೂರಿ ಯಕ್ಷಗಾನದಲ್ಲಿ ಗಾನ ಸಾರಥಿ ಬಿರುದಾಂಕಿತ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ಹಾಗೂ ಯಕ್ಷರಂಗದ ಸಿಡಿಲಮರಿ ಖ್ಯಾತಿಯ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ನಾರಾಯಣ ಹೆಗ್ಡೆ ಈರ್ವ ಕಲಾವಿದರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಕ್ಕಿಗದ್ದೆ ಫೆಂಡ್ಸ್‌ನ ದೇವರಾಜ ಆಚಾರ್ಯ, ಗೋವಿಂದರಾಜ್ ಆಚಾರ್ಯ, ಪ್ರದೀಪ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಗಣೇಶ್ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.

Exit mobile version