Kundapra.com ಕುಂದಾಪ್ರ ಡಾಟ್ ಕಾಂ

ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಳೆದ ಒಬತ್ತು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೋರ್ವಳು ವಿಷ ಸೇವಿಸಿ, ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಆಜ್ರಿ ಹನೆಬಚ್ಚಲು ನಿವಾಸಿ ಜ್ಯೋತಿ ಪೂಜಾರಿ(೨೬) ಮೃತ ದುರ್ದೈವಿ.

ನಾಲ್ಕು ವರ್ಷಗಳಿಂದ ಪ್ರೀತಿಸಿದ ಉಮೇಶ್ ಎಂಬ ಯುವಕನೊಂದಿಗೆ ಮನೆಯವರ ಒಪ್ಪಿಸಿ ಒಂಬತ್ತು ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಬಳ್ಕೂರು ಉಗ್ರಣಿಬೆಟ್ಟವಿನವಳಾದ ಜ್ಯೋತಿ, ಆಜ್ರಿಯ ಗಂಡನ ಮನೆಯಲ್ಲಿ ಅತ್ತೆ, ಮಾವ, ನಾದಿನಿ ಮತ್ತು ಇಬ್ಬರು ಮೈದುನರೊಂದಿಗೆ ನೆಲೆಸಿದ್ದರು. ಪತಿ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Exit mobile version