Kundapra.com ಕುಂದಾಪ್ರ ಡಾಟ್ ಕಾಂ

ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲ. ಕಾಂಗ್ರೆಸ್ ಬೆಂಬಲಿತರಿಗೆ ಗದ್ದುಗೆ

ಕುಂದಾಪ್ರ ಡಾಟ್ ಕಾಂ ವರದಿ.
ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣೆಯಲ್ಲಿ ಈ ಭಾರಿ ಬಿಜೆಪಿ ಅಧಿಕಾರ ಕೈತಪ್ಪಿದ್ದು ಕಾಂಗ್ರೆಸ್ ಸುಲಭವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಇಂದು ಮಿನಿ ವಿಧಾನಸೌಧದಲ್ಲಿ 6 ಕ್ಷೇತ್ರಗಳಿಗೆ ನಡೆದ ಚುನಾವಣೆಗೆ ಮತ ಎಣಿಕೆ ನಡೆದಿದ್ದು, 3ಕಾಂಗ್ರೆಸ್ 3 ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಸಮಬಲ ಸಾಧಿಸಿದ್ದಾರೆ.

ಉಳಿದ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ 3 ಹಾಗೂ ಬಿಜೆಪಿ ಬೆಂಬಲಿತ 4 ಅಭ್ಯರ್ಥಿಗಳು ಆಯ್ಕೆಗೊಂಡಿದ್ದರು. ಒಟ್ಟು ಹದಿಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ 6 ಸ್ಥಾನ ಪಡೆದುಕೊಂಡರೆ, ಬಿಜೆಪಿ ಪಕ್ಷ 7 ಸ್ಥಾನ ಪಡೆದು ಬಹುಮತ ಸಾಧಿಸಿದ್ದರೂ ಮೂವರು ನಾಮ ನಿರ್ದೇಶಿತ ಸದಸ್ಯರಿಂದಾಗಿ ಅಧಿಕಾರ ಕೈತಪ್ಪಲಿದೆ. ಎಪಿಎಂಸಿ ಆರು ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ವರ್ತಕ ಕ್ಷೇತ್ರ, ಶಿರೂರು ಹಾಗೂ ಕಿರಿಮಂಜೇಶ್ವರದಲ್ಲಿ ಬಿಜೆಪಿ ಬೆಂಲಿತರು ಜಯ ಸಾಧಿಸಿದರೆ, ಕಂಬದಕೋಣೆ, ತ್ರಾಸಿ, ವಂಡ್ಸೆ ಕೃಷಿ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿಗರು ವಿಜಯ ಗಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ.

ರೈತ ಸಂಘದ ಅಧ್ಯಕ್ಷರ ಸೋಲು
ಎರಡು ಭಾರಿ ಎಂಪಿಎಂಸಿಯ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ದೀಪಕ್‌ಕುಮಾರ್ ಶೆಟ್ಟಿ ಈ ಭಾರಿ ಸೋಲು ಕಂಡಿದ್ದಾರೆ. ಒಂದು ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದ ದೀಪಕ್ ಕುಮಾರ್ ಶೆಟ್ಟಿ ಮೂರನೇ ಬಾರಿ ಸ್ವರ್ಧಿಸಿದ್ದರು. ರೈತಸಂಘದ ಅಧ್ಯಕ್ಷರಾಗಿಯೂ ಗುರುತಿಸಿಕೊಂಡಿದ್ದರು. ಆದರೆ ಈ ಭಾರಿ ಕಂಬದಕೋಣೆ ಕ್ಷೇತ್ರದಿಂದ ಸ್ವರ್ಧಿಸಿ ಸೋಲು ಕಂಡಿದ್ದಾರೆ.

ಕುಂದಾಪುರ ಎಪಿಎಂಸಿಯಲ್ಲಿ ಒಟ್ಟು 13 ಕ್ಷೇತ್ರಗಳ ಪೈಕಿ 11 ಕೃಷಿಕರ ಕ್ಷೇತ್ರ, ತಲಾ ಒಂದು ಟಿಎಪಿಸಿಎಂ ಹಾಗೂ ಮಾರಾಟ ಪ್ರತಿನಿಧಿಗಳ ಕ್ಷೇತ್ರವಿದ್ದು, ಕುಂದಾಪುರ ಎಪಿಎಂಸಿ ಚುನಾವಣೆಗೆ ಒಟ್ಟು 42 ನಾಮಪತ್ರ ಸಲ್ಲಿಕೆಯಾಗಿದ್ದು, 16 ಮಂದಿ ಕಣದಲ್ಲಿದ್ದರು.

ಗೆಲುವು ಸಾಧಿಸಿದ ಅಭ್ಯರ್ಥಿಗಳು

ಅವಿರೋಧವಾಗಿ ಆಯ್ಕೆಗೊಂಡವರು:

ಮತವಿವರ:

ವಿಜಯೋತ್ಸವ
ಕುಂದಾಪುರ ಎಪಿಎಂಸಿ ಚುನಾವಣೆಯಲ್ಲಿ ಜಯಗಳಿಸದ ಕಾಂಗ್ರೆಸ್ ಬೆಂಬಲಿತರಾದ ಶರತ್ ಕುಮಾರ್ ಶೆಟ್ಟಿ, ವಸಂತ ಹೆಗ್ಡೆ, ಸಂಜು ಪೂಜಾರಿ ವಿಜಯೋತ್ಸವ ಆಚರಿಸಿದರೇ ಬಿಜೆಪಿ ಬೆಂಬಲದಿಂದ ಆಯ್ಕೆಯಾದ ವೆಂಕಟ ಪೂಜಾರಿ, ಮಂಜು ದೇವಾಡಿಗ, ರಾಮರಾಯ ಕಾಮತ್ ಅವರನ್ನು ಬಿಜೆಪಿ ಕಾರ‍್ಯಕರ್ತರು ಅಭಿನಂದಿಸಿದರು. © ಕುಂದಾಪ್ರ ಡಾಟ್ ಕಾಂ.

► ಕುಂದಾಪುರ ಎಪಿಎಂಸಿ ಚುನಾವಣೆ. ಗದ್ದುಗೆಗೆ ಪೈಪೋಟಿ – http://kundapraa.com/?p=20589

Exit mobile version