Kundapra.com ಕುಂದಾಪ್ರ ಡಾಟ್ ಕಾಂ

ನಾಕಟ್ಟೆಯಲ್ಲಿ ಕೋಟಿ ಚೆನ್ನಯ ಪಂಜುರ್ಲಿ ಗರಡಿ ಜೀಣೋದ್ಧಾರಕ್ಕೆ ಶಿಲಾ ಮುಹೂರ್ತ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಡ್ತರೆ ನಾಕಟ್ಟೆಯಲ್ಲಿ ಕೋಟಿ ಚೆನ್ನಯ ಪಂಜುರ್ಲಿ ಗರಡಿಯ ಜೀಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಸೋಮವಾರ ದೇವಳದ ಶಿಲಾ ಮುಹೂರ್ತ ಜರುಗಿತು.

ಶಿಲ್ಪಿ ಕೃಷ್ಣ ನಾಯ್ಕ್ ಶಿಲಾ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನವನ್ನು ನಂಬಿದ ಭಕ್ತರಾದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಗ್ರಾಮ ಪಂಚಾಯತ್ ಸದಸ್ಯ ವೆಂಕ್ಟ ಪೂಜಾರಿ, ಗರಡಿಯ ಅರ್ಚಕ ಕುಟುಂಬದ ಮಂಜುನಾಥ ಪೂಜಾರಿ ಮೇಲ್ಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಮಂಜಯ್ಯ ಪೂಜಾರಿ, ರಘುರಾಮ ಪೂಜಾರಿ ಶಿರೂರು, ಮಂಜುನಾಥ ಪೂಜಾರಿ ಮುಂಬೈ, ಕೋಟಿ ಪೂಜಾರಿ, ಚಂದ್ರ ಪೂಜಾರಿ ಕುದ್ರಿತ್ಲು, ಐ.ಆರ್.ಬಿ ಅಧಿಕಾರಿ ಯೋಗೇಂದ್ರಪ್ಪ ಮೊದಲಾದವರು ಉಪಸ್ಥಿತರಿದ್ದರು.

Exit mobile version