ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದ ಕೇಂದ್ರಭಾಗದಲ್ಲಿರುವ ದಿನಸಿ ಅಂಗಡಿ ನಾಯಕ್ ಸ್ಟೋರ್ಸ್ಗೆ ರಾತ್ರಿ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ. ಅಕಸ್ಮಿಕವಾಗಿ ಬೆಂಗಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅವಘಡದಿಂದಾಗಿ ಲಕ್ಷಾಂತರ ಮೌಲ್ಯದ ರೂಪಾಯಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.