Kundapra.com ಕುಂದಾಪ್ರ ಡಾಟ್ ಕಾಂ

ಮಕ್ಕಳಲ್ಲಿ ನೈತಿಕ-ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು: ಡಾ ಎಚ್.ವಿ ನರಸಿಂಹಮೂರ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟೇಶ್ವರ: ಗುರುಕುಲ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ತಮ್ಮ ಅಜ್ಜಿ-ಅಜ್ಜಂದಿರಿಗಾಗಿ ವಿಶೇಷ ಕಾರ‍್ಯಕ್ರಮವನ್ನು ಆಯೋಜಿಸಲಾಗಿತ್ತು.

ಡಾ.ಎಚ್.ವಿ.ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಾಲೆ ಎಂದರೆ ಕೇವಲ ಮಕ್ಕಳಿಗೆ ಅಂಕ ಪಟ್ಟಿ ನೀಡುವ ಸಂಸ್ಥೆ ಅಲ್ಲ, ಬದಲಾಗಿ ಮಕ್ಕಳಲ್ಲಿ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಪಾಶ್ಚಾತ್ಯ ಶಿಕ್ಷಣದ ಹಾವಳಿಯಿಂದ ನಮ್ಮ ತನ ಮರೆಯಾಗುತ್ತಿರುವ ಈ ಕಾಲದಲ್ಲಿ ಅದನ್ನು ಉಳಿಸಿಕೊಳ್ಳಲು ಇಂತಹ ಕಾರ‍್ಯಕ್ರಮಗಳು ಹೆಚ್ಚಾಗಿ ಮೂಡಿ ಬರಬೇಕು. ಕೂಡು ಕುಟುಂಬದಲ್ಲಿ ಇರುವ ಆಚಾರ-ವಿಚಾರಗಳ ಮಹತ್ವದ ಕುರಿತು ತಿಳಿಸಿದರು.

ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ‍್ಯನಿರ್ವಾಹಕಿ ಅನುಪಮ ಎಸ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲ ಶಾಯಿಜು ಕೆ. ಆರ್ ನಾಯರ್ ಉಪಸ್ಥಿತರಿದ್ದರು. ವಿಶಾಲ.ಶೆಟ್ಟಿ ಕಾರ‍್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿದ್ಯಾ ಸ್ವಾಗತಿಸಿದರು, ಶಿಕ್ಷಕಿ ವಿಜೇತ ವಂದಿಸಿದರು.

 

Exit mobile version