Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಉಪನ್ಯಾಸಕ ಸುಬ್ರಹ್ಮಣ್ಯ ದೇವಾಡಿಗ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಸುಬ್ರಹ್ಮಣ್ಯ ದೇವಾಡಿಗ (36) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ.

ಬೈಂದೂರು ವಿದ್ಯಾನಗರ ನಿವಾಸಿಯಾದ ಸುಬ್ರಹ್ಮಣ್ಯ ಅವರು ಅತಿಥಿ ಉಪನ್ಯಾಸಕರಾಗಿ ಬೈಂದೂರು ಕಾಲೇಜು ಹಾಗೂ ಭಟ್ಕಳದ ಸಿದ್ಧಾರ್ಥ ಕಾಲೇಜಿನಲ್ಲಿ ಸೇವೆಸಲ್ಲಿಸುತ್ತಿದ್ದರು. ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಿರ್ದೇಶಕಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಓರ್ವ ಸಹೋದರ, ಈರ್ವರು ಸಹೋದರಿಯರು, ಬಂಧುಗಳು ಹಾಗೂ ವಿದ್ಯಾರ್ಥಿ ವೃಂದವನ್ನು ಅಗಲಿದ್ದಾರೆ.

Exit mobile version