Kundapra.com ಕುಂದಾಪ್ರ ಡಾಟ್ ಕಾಂ

ಕಾರು-ಲಾರಿ ಡಿಕ್ಕಿ: ಕಾರು ಚಾಲಕನಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಮರವಂತೆ ಗ್ರಾ.ಪಂ ವ್ಯಾಪ್ತಿಯ ನೀರೋಣಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಕುಂದಾಪ್ರ ಡಾಟ್ ಕಾಂ.

ರಿಟ್ಜ್ ಕಾರು ಹಾಗೂ ಸರಕು ತುಂಬಿದ ಗೂಡ್ಸ್ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಉಡುಪಿ ಜಿಲ್ಲಾ ಎಸ್ಪಿ ಕಚೇರಿಯ ಗುಮಾಸ್ತ, ಕಾರಿನ ಚಲಾಯಿಸುತ್ತಿದ್ದ ಕೃಷ್ಣಮೂರ್ತಿ ಎಂಬುವರು ಗಾಯಗೊಂಡಿದ್ದಾರೆ. ಹೊನ್ನಾವರದಿಂದ ಉಡುಪಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನೀರೋಣಿ ಬಳಿ ಎದುರಿನಿಂದ ಬಂದ ಸರಕು ಲಾರಿ ನೇರ ಡಿಕ್ಕಿ ಹೊಡೆದಿದೆ. ತಕ್ಷಣ ಗಾಯಗೊಂಡವರನ್ನು ತಕ್ಷಣ ಕುಂದಾಪುರ ಖಾಸಗೀ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Exit mobile version