Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ: ವಿಹಿಂಪ ಬಜರಂಗದಳದಿಂದ ಯುಗಾದಿ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿಶ್ವ ಹಿಂದೂ ಪರಿಷತ್ – ಬಜರಂಗದಳ ಮರವಂತೆ ಘಟಕದ ಆಶ್ರಯದಲ್ಲಿ ಯುಗಾದಿ ಹಬ್ಬದ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿದವು.

ಕರ್ನಾಟಕ ದಕ್ಷಿಣ ಪ್ರಾಂತ ಮಠ ಮಂದಿರ ಪ್ರಮುಖ್ ಪ್ರೇಮಾನಂದ ಶೆಟ್ಟಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ವಿಶ್ವ ಹಿಂದೂ ಪರಿಷತ್ ಬಜರಂಗದಳ ತಾಲೂಕು ಅಧ್ಯಕ್ಷ ಶ್ರೀಧರ ಬಿಜೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಸಂಚಾಲಕ ನಿತ್ಯಾನಂದ ಉಪ್ಪುಂದ, ನಾಗರಾಜ್, ಸತೀಶ್ ಮೊದಲಾದವರು ಉಪಸ್ಥಿತರಿದ್ದರು.  ಯುಗಾದಿ ಹಬ್ಬದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಘಟಕದ ಕಾರ್ಯಕರ್ತರು ಮರವಂತೆಯ ಮನೆಗಳಿಗೆ ತೆರಳಿ ಬೇವು ಬೆಲ್ಲ ನೀಡಿ ಶುಭಕೋರಿದರು. ರಾತ್ರಿ ಸಹಭೋಜನ ನಡೆಸಿದರು.

Exit mobile version