Site icon Kundapra.com ಕುಂದಾಪ್ರ ಡಾಟ್ ಕಾಂ

ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೇಸಿಐ ವಲಯ ೧೫ರ ಜೇಸಿಐ ಕುಂದಾಪುರ ಘಟಕ ಹಾಗೂ ಜೇಸಿಐ ಕುಂದಾಪುರ ಚರಿಷ್ಮಾ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) ಕುಂದಾಪುರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಗಾರ ಆಯೋಜಿಸಲಾಯಿತು.

ರಾಷ್ಟ್ರೀಯ ನಿರ್ದೇಶಕರು ಜೆಸಿರೇಟ್ ಹಾಗೂ ಲೇಡಿಲೋಮ್ ಜೇಸಿ ವಿಭಾಗ ಜೇಸಿ ರೂಪಶ್ರೀ ರತ್ನಾಕರ ಇಂದ್ರಾಳಿ ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಗಾರ ಉದ್ಘಾಟಿಸಿದರು. ಜೇಸಿಐ ಕುಂದಾಪುರ ಚರೀಷ್ಮಾ ಅಧ್ಯಕ್ಷೆ ಗೀತಾಂಜಲಿ ಆರ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಲಯ ಅದಿಕಾರಿ ಜೆ.ಎಫ್.ಪಿ ವಿಷ್ಣು ಕೆ. ಬಿ, ಜೇಸಿಐ ಕುಂದಾಪುರದ ಅಧ್ಯಕ್ಷರಾದ ಜೆ.ಎಫ್.ಪಿ ಅಕ್ಷತಾ ಗಿರೀಶ್ ಉಪಸ್ಥಿತರಿದ್ದರು.

ಸಭೆಯಲ್ಲಿ ಜೇಸಿರೇಟ್ ಅಧ್ಯಕ್ಷೆ ಜೇಸಿ ನಾಗರತ್ನ ಹೇರ್ಳೆ ಜೇಸಿರೇಟ್ ಸಂಯೋಜಕಿ ನಾಗರತ್ನ ಚಂದ್ರಶೇಖರ್, ಜೇಸಿರೇಟ್ ನ ನಿಕಟ ಪೂರ್ವಧ್ಯಕ್ಷೆ ಮಾಲತಿ ವಿಷ್ಣು ಜೇಸಿರೇಟ್ ಪೂರ್ವಧ್ಯಕ್ಷೆ ಗುಣರತ್ನ ಮಾಲಿನಿ ಸತೀಶ್ ಜೇಸಿಐ ಜ್ಯೂನಿಯರ್ ಜೇಸಿ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ಗುಲ್ವಾಡಿ ಜೇಸಿಐ ಕುಂದಾಪುರದ ಕಾರ್ಯದರ್ಶಿ ರಾಘು ವಿಠಲ್‌ವಾಡಿ ಉಪಾಧ್ಯಕ್ಷ ಜೇಸಿಪ್ರವೀಣ್, ಜೇಸಿ ಅಶೋಕ್ ತೆಕ್ಕಟ್ಟೆ, ಜೇಸಿ ಚೇತನ್ ,ಜೇಸಿ ಶರ್ಮಿಳಾ ಕಾರಂತ್, ಜೇಸಿ ಸರೋಜ ಜೇಸಿ ರೋಶಿನಿ ಉಪಸ್ಥಿತರಿದ್ದರು ಜೇಸಿಐ ಕುಂದಾಪುರ ಚರೀಷ್ಮಾದ ಕಾರ್ಯದರ್ಶಿ ಜೇಸಿ ಜಯಲಕ್ಷ್ಮಿ ಅರುಣ್. ವಂದಿಸಿದರು.

 

Exit mobile version