Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಬಾಹುಬಲಿ-2 ಸಿನೆಮಾ ನೋಡಲು ರಜೆ ಕೇಳಿದ ವಿದ್ಯಾರ್ಥಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದೇಕೆ ಎನ್ನುವುದನ್ನು ತಿಳಿಯಲು ಕುಂದಾಪುರದ ವಿನಾಯಕ ಚಿತ್ರಮಂದಿರಕ್ಕೆ ಹೋಗುತ್ತಿದ್ದು, ಒಂದು ದಿನದ ರಜೆ ನೀಡಬೇಕು ಎಂದು ಪದವಿ ವಿದ್ಯಾರ್ಥಿಯೊಬ್ಬ ರಜೆ ಅರ್ಜಿ ಬರೆದಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿದ್ಯಾರ್ಥಿಗೆ ರಜೆ ಸಿಕ್ಕಿದೆಯೋ ಇಲ್ಲವೋ ಎಂಬ ಕುತೂಹಲ ಮೂಡಿತ್ತು!

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಾಂಶುಪಾಲರು ಗೈರು ಹಾಜರಿಗೆ ರಜೆ ಕೇಳಬೇಕೆಂದೇನೂ ಇಲ್ಲ. ಏ.12ಕ್ಕೆ ಶೈಕ್ಷ ಣಿಕ ವರ್ಷದ ವರ್ಕಿಂಗ್ ಡೇ ಕೊನೆಗೊಂಡಿದೆ. ವ್ಯಾಟ್ಸ್ಯಾಪ್ನಲ್ಲಿ ತಮಾಷೆಗೆ ಈ ಸಂದೇಶ ಹರಿಬಿಟ್ಟಿರಬಹುದು ಎಂದಿದ್ದಾರೆ. ಈ ವಿಚಾರ ನನ್ನ ಗಮನಕ್ಕೂ ಬಂದಿಲ್ಲ ಎಂದಿದ್ದಾರೆ.

Exit mobile version