Kundapra.com ಕುಂದಾಪ್ರ ಡಾಟ್ ಕಾಂ

ಗೋಹತ್ಯೆ ನಿಷೇಧಕ್ಕೆ ಕೇಂದ್ರ ಒಲವು: ಗೋಪ್ರೇಮಿಗಳ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಕೇಂದ್ರ ಸರಕಾರ ದೇಶದಲ್ಲಿ ಗೋಹತ್ಯೆ ನಿಷೇಧಿಸುವ ಕುರಿತು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸಿ ಗಂಗೊಳ್ಳಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಸಂಭ್ರಮಾಚರಣೆ ನಡೆಸಿದರು.

ಮ್ಯಾಂಗನೀಸ್ ರಸ್ತೆಯ ಬಳಿ ಮುಖ್ಯರಸ್ತೆಯ ಸಮೀಪ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಕೇಂದ್ರ ಸರಕಾರದ ಗೋಹತ್ಯೆ ನಿಷೇಧದ ಅದೇಶವನ್ನು ಸ್ವಾಗತಿಸಿ ಸರಕಾರದ ಕ್ರಮವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಮೂರು ವರ್ಷ ಪೂರೈಸುತ್ತಿರುವ ಸುಸದಂರ್ಭದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ ಎಂದು ಕಾರ್ಯಕರ್ತರು ಕೇಂದ್ರ ಸರಕಾರ ಕಾರ್ಯವನ್ನು ಶ್ಲಾಘಿಸಿದರು.

ಬೈಂದೂರು ಕ್ಷೇತ್ರ ಬಿಜೆಪಿ ಮುಖಂಡ ರಾಮಪ್ಪ ಖಾರ್ವಿ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗ್ರಾಪಂ ಸದಸ್ಯ ಬಿ.ಗಣೇಶ ಶೆಣೈ, ಬಿಜೆಪಿ ಕಾರ್ಯಕರ್ತರಾದ ಶಂಕರ ದೇವಾಡಿಗ, ರತ್ನಾಕರ ಗಾಣಿಗ, ನವೀನ ದೊಡ್ಡಹಿತ್ಲು, ದಿಲೀಪ್ ಖಾರ್ವಿ, ಮೋಹನ ಖಾರ್ವಿ, ಯಶವಂತ ಖಾರ್ವಿ, ನಿತ್ಯಾನಂದ ಖಾರ್ವಿ, ನಿತಿನ್ ಖಾರ್ವಿ, ರಾಘವೇಂದ್ರ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

 

Exit mobile version