Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾ ಭಾರತ್ ಸೇವಾದಳ ಅಧ್ಯಕ್ಷರಾಗಿ ಯು.ಆರ್ ಸಭಾಪತಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾನುವಾರ ಬೆಳಿಗ್ಗೆ ಉಡುಪಿಯ ಅಜ್ಜರಕಾಡು ಮೈದಾನದ ಸಮೀಪದಲ್ಲಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ ಕೇಂದ್ರ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರೀಯೆಯಲ್ಲಿ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಪ್ರತಿನಿಧಿಯಾಗಿ ಮಾಜಿ ಶಾಸಕ ಯು.ಆರ್.ಸಭಾಪತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ರಾಜೇಶ್ ಕೆ.ಸಿ ಕುಂದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆರೂರು ತಿಮ್ಮಪ್ಪ ಶೆಟ್ಟಿ, ಕೋಶಾಧ್ಯಕ್ಷರಾಗಿ ಟಿ.ಗೋಪಾಲಕೃಷ್ಣ ಶೆಟ್ಟಿ ಉಡುಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಸಹಕಾರಿ ಉಪನಿಬಂಧಕರಾದ ಪ್ರವೀಣ್ ನಾಯಕ್ ಅವರ ನೇತ್ರತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾ ಭಾರತ್ ಸೇವಾದಳದ ಜಿಲ್ಲಾ ಸಮಿತಿಯ ಸದಸ್ಯರಾದ ಅಂಡಾರು ದೇವಿಪ್ರಸಾದ ಶೆಟ್ಟಿ, ಸುವರ್ಧನ್ ನಾಯಕ್ ಉಡುಪಿ, ಮೇಟಿ ಮುದಿಯಪ್ಪ, ಎಂ.ಸಿ.ಆಚಾರ್ಯ ಕಾರ್ಕಳ, ಗಿರೀಶ್ ಅಂಚನ್ ಉಡುಪಿ, ಸಂಜೀವ ದೇವಾಡಿಗ ಕಾರ್ಕಳ ಹಾಗೂ ಅಶೋಕ ಮಾಡ ಭಾಗವಹಿಸಿದ್ದರು.

 

Exit mobile version