Kundapra.com ಕುಂದಾಪ್ರ ಡಾಟ್ ಕಾಂ

ಸಮಾಜದಲ್ಲಿ ಉತ್ತಮ ಪರಿವರ್ತನೆಗೆ ರೋಟರಿ ಶ್ರಮಿಸುತ್ತಿದೆ: ಕೃಷ್ಣ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಗತ್ತಿನ ಉದ್ದಾಗಲಕ್ಕೂ ಹಬ್ಬಿರುವ ರೋಟರಿ ವೈವಿಧ್ಯತೆಯ ಪ್ರತೀಕವಾಗಿದ್ದು, ಸಮಾಜದಲ್ಲಿ ಉತ್ತಮ ಪರಿವರ್ತನೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಾ ಮುನ್ನಡೆಯುತ್ತಿದೆ. ಸಾಮಾಜಿಕ ಸೇವೆಯಲ್ಲಿ ಅನನ್ಯ ಕೊಡುಗೆಗಳನ್ನು ನೀಡುತ್ತಿದೆ ಎಂದು ರೋಟರಿ ಮಾಜಿ ಗವರ್ನರ್ ಕೃಷ್ಣ ಶೆಟ್ಟಿ ಹೇಳಿದರು.

ಅವರು ಕುಂದಾಪುರದ ಈಸ್ಟ್ ವೆಸ್ಟ್ ಕಂಟ್ರಿ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಕುಂದಾಪುರದ ಪದಪ್ರಧಾನ ಸಮಾರಂಭದಲ್ಲಿ ನೂತನ ಅದ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಿಗೆ ಪದಪ್ರಧಾನ ನೆರವೇರಿಸಿ ಮಾತನಾಡಿದರು.

ನೂತನ ಅಧ್ಯಕ್ಷರಾಗಿ ಗಣೇಶ್ ಐತಾಳ್, ನೂತನ ಕಾರ್ಯದರ್ಶಿಯಾಗಿ ಅಶ್ಪಕ್ ಪ್ರಮಾಣ ವಚನ ಸ್ವೀಕರಿಸಿದರು. ವಲಯ ೧ರ ಅಸಿಸ್ಟೆಂಟ್ ಗವರ್ನರ್ ಕೃಷ್ಣ ಕಾಂಚನ್ ಅವರು ಅಕಾರ್ಡ್ ಕ್ಲಬ್ ಬುಲೆಟಿನ್ ಬಿಡುಗಡೆ ಗೊಳಿಸಿದರು. ಬುಲೆಟಿನ್ ಎಡಿಟರ್ ಪರಮೇಶ್ವರ ಹೆಗಡೆ ಸಹಕರಿಸಿದರು. ನಿಕಟಪೂರ್ವಾಧ್ಯಕ್ಷ ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಸಾಲಗದ್ದೆ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು. ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ನೂತನ ಕಾರ್ಯದರ್ಶಿ ಅಶ್ಪಕ್ ವಂದಿಸಿದರು.

Exit mobile version