Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನಾಯಕತ್ವ ತರಬೇತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ವ್ಯಕ್ತಿತ್ವವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವ ಜೊತೆಗೆ ನಾಯಕತ್ವವನ್ನು ಬೆಳಸಿಕೊಳ್ಳುವ ಸದಾವಕಾಶ ಜೇಸಿಯಂತಹ ಸಂಸ್ಥೆಗಳಿಂದ ದೊರೆಯುತ್ತದೆ. ಇಲ್ಲಿನ ತರಬೇತಿಯ ಸಂಪೂರ್ಣ ಪ್ರಯೋಜನವನ್ನು ಪಡೆದು ಯುವ ಪೀಳಿಗೆ ಉತ್ತಮ ನಾಯಕತ್ವ ಗುಣವನ್ನು ಹೊಂದುವಂತಾಗಲಿ ಎಂದು ರೋಟರಿ ಕ್ಲಬ್ ಕುಂದಾಪುರದ ಪೂರ್ವಾಧ್ಯಕ್ಷ ಕೆ. ಆರ್. ನಾಯ್ಕ್ ಹೇಳಿದರು.

ಅವರು ಜೇಸಿಐ ಕುಂದಾಪುರ ಸಿಟಿ ಮತ್ತು ಜೇಸಿಐ ಕುಂದಾಪುರ ಚರೀಷ್ಮಾದ ಆಶ್ರಯದಲ್ಲಿ ಕುಂದಾಪುರದ ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ ನಡೆದ ನಾಯಕತ್ವ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜೇಸಿ ವಲಯ ತರಬೇತುದಾರರಾದ ಕೆ.ಕೆ. ಶಿವರಾಮ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರವೀಣ್ ಅಮೃತ್ ಮಾರ್ಟಿಸ್, ಜೇಸಿಐ ಕುಂದಾಪುರ ಸಿಟಿ ಕಾರ್ಯದರ್ಶಿ ಪ್ರಶಾಂತ ಹವಾಲ್ದಾರ್, ಸದಸ್ಯ ಸಾಯಿನಾಥ ಶೇಟ್, ಜ್ಯೂ.ಜೇಸಿ ಅಧ್ಯಕ್ಷ ಪ್ರಜ್ವಲ್ ದೇವಾಡಿಗ ಉಪಸ್ಥಿತರಿದ್ದರು.

ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಶ್ರೀಧರ ಸುವರ್ಣ ಸ್ವಾಗತಿಸಿದರು. ಜೇಸಿಐ ಕುಂದಾಪುರ ಚರೀಷ್ಮಾ ಅಧ್ಯಕ್ಷೆ ಗೀತಾಂಜಲಿ ಆರ್. ನಾಯ್ಕ್ ವಂದಿಸಿದರು.

Exit mobile version