Kundapra.com ಕುಂದಾಪ್ರ ಡಾಟ್ ಕಾಂ

ಪಾಣ್ತಿ ಗರಡಿ ಹೈಗುಳಿ ಮತ್ತು ಪರಿವಾರ ದೈವಸ್ಥಾನಕ್ಕೆ ದತ್ತಿ ಇಲಾಖೆಯಿಂದ 5 ಲಕ್ಷ ಅನುದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಡ್ತರೆ ಸಮೀಪದ ಪಾಣ್ತಿ ಗರಡಿ ಹೈಗುಳಿ ಮತ್ತು ಪರಿವಾರ ದೈವಸ್ಥಾನದ ಜೀಣೋದ್ಧಾರ ಕಾರ್ಯ ನಡೆಯುತ್ತಿದ್ದು, ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಬೈಂದೂರು ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು 5 ಲಕ್ಷ ರೂ. ದೇಣಿಗೆಯನ್ನು ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಮೋಹನ ಪೂಜಾರಿ ಉಪ್ಪುಂದ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಮದನ್‌ಕುಮಾರ್ ಉಪ್ಪುಂದ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಾಗರಾಜ ಪಿ. ಯಡ್ತರೆ, ಸದಸ್ಯ ಮಹೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Exit mobile version