Kundapra.com ಕುಂದಾಪ್ರ ಡಾಟ್ ಕಾಂ

ರಾಪ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಶಕ ಸಮಿತಿ ಸದಸ್ಯರಾಗಿ ಕೆ. ವೆಂಕಟೇಶ ಕಿಣಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅವರನ್ನು ಕೇಂದ್ರ ರೈಲ್ವೆ ಮಂತ್ರಾಲಯವು ರಾಪ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಶಕ ಸಮಿತಿ ಸದಸ್ಯರನ್ನಾಗಿ ಮುಂದಿನ ಎರಡು ವರ್ಷದ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಇತಿಹಾಸದಲ್ಲಿ ಇದೇ ಮೊದಲ ಭಾರಿಗೆ ಕರಾವಳಿ ಭಾಗದವರಿಗೆ ಈ ಅವಕಾಶ ದೊರೆತಿರುವುದು ರಾಷ್ಟ್ರಮಟ್ಟದ ಪ್ರಾತಿನಿಧ್ಯ ಸಿಕ್ಕಿದಂತಾಗಿದೆ. ಮಾಜಿ ಮುಖ್ಯಮಂತ್ರಿ, ಸಂಸದ ಬಿ. ಎಸ್. ಯಡಿಯೂರಪ್ಪ ವೆಂಕಟೇಶ ಕಿಣಿಯವರ ಆಯ್ಕೆ ಕುರಿತಂತೆ ಕೇಂದ್ರ ರೈಲ್ವೆ ಮಂತ್ರಿಗಳಿಗೆ ಶಿಫಾರಸು ಮಾಡಿದ್ದರು.

ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಲ್ಲಿ ಕಿಣಿ ಅವರ ಶ್ರಮ ಅಪಾರವಾದದ್ದು. ರೈಲ್ವೆ ಯಾತ್ರಿ ಸಂಘದ ಮೂಲಕ ಹಲವು ವರ್ಷಗಳಿಂದ ನಿರಂತರವಾಗಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸುತ್ತಾ, ಬೇಡಿಕೆಯಿಡುತ್ತಾ ಕಾರ್ಯಸಾಧಿಸುವಲ್ಲಿ ಶ್ರಮಿಸಿದ್ದಾರೆ. ತಮ್ಮ ಉದ್ಯಮದೊಂದಿಗೆ ಬೈಂದೂರಿನ ಅಭಿವೃದ್ಧಿ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಕೆಲವೇ ಕೆಲವರ ಪೈಕಿ ವೆಂಕಟೇಶ ಕಿಣಿ ಅವರೂ ಓರ್ವರೆನಿಸಿಕೊಂಡಿದ್ದಾರೆ.

Exit mobile version