Kundapra.com ಕುಂದಾಪ್ರ ಡಾಟ್ ಕಾಂ

ರಾಘವೇಂದ್ರ ಸ್ವಾಮಿಗಳ 346ನೇ ಆರಾಧನ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದದಲ್ಲಿರುವ ಮಂತ್ರಾಲಯ ಶಾಖಾ ಮಠದದಲ್ಲಿ ಶ್ರಿಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿಗಳ ೩೪೬ನೇ ಆರಾಧನ ಮಹೋತ್ಸವ ವೈಭವದಿಂದ ನಡೆಯಿತು. ಬೆಳಿಗ್ಗೆಯಿಂದ ಪಂಚಾಮೃತ ಅಭಿಷೇಕ, ಅರ್ಚನೆ, ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು. ಸುಮಾರು ಎರಡು ಸಾವಿರಕ್ಕೂ ಅಧಿಕ ಭಕ್ತಾದಿಗಳು ಮಠಕ್ಕೆ ಆಗಮಿಸಿ ಗುರುಗಳ ಪಾದಪೂಜೆಗೈದು ಸಂತೃಪ್ತರಾದರು. ಮಧ್ಯಾಹ್ನ ಮಹಾಅನ್ನಸಂತರ್ಪಣೆ ಹಾಗೂ ರಾತ್ರಿ ವಿಶೇಷ ಹೂವಿನ ಪೂಜೆ, ಪಲ್ಲಕ್ಕಿ ಸೇವೆ ನಡೆಯಿತು

Exit mobile version