ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜಿನ ಹಿರಿಯ ಪ್ರಾಧ್ಯಾಪಕಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಸೇವಾ ನಿವೃತ್ತಿ ಹೊಂದಿದ ಡಾ.ಪಾರ್ವತಿ.ಜಿ.ಐತಾಳ್ ಇವರನ್ನು ಕಾಲೇಜಿನ ಅಧ್ಯಾಪಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಣಿಪಾಲದ ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿ ಡಾ. ಹೆಚ್.ಶಾಂತಾರಾಮ್ ವಹಿಸಿದ್ದರು.
ಇಂಗ್ಲೀಷ್ ವಿಭಾಗದ ಡಾ.ಹಯವದನ ಉಪಾಧ್ಯಾಯ ಡಾ.ಪಾರ್ವತಿ .ಜಿ.ಐತಾಳ್ ಅವರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲಾಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ,ಅಧ್ಯಾಪಕರ ಸಂಘದ ಪದಾಧಿಕಾರಿಗಳಾದ ರಾಜ್ಯಶಾಸ್ತ್ರ್ ವಿಭಾದದ ಮುಖ್ಯಸ್ಥರಾದ ಡಾ.ಶುಭಕರಾಚಾರಿ ಪ್ರಾಣಿಶಾಸ್ತ್ರ ವಿಭಾಗದ ಡಾ.ಕೆ.ಎಮ್.ವಿಜಯಕುಮಾರ್ಮತ್ತು ವಾಣಿಜ್ಯ ವಿಭಾಗದ ರಿತಿನ್ವೇದಿಕೆಯಲ್ಲಿ ಉಪಸ್ಥಿತರಿದ್ದರು.