Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ಹಿಂದೂ ಪರಿಷತ್ ಬಜರಂಗದಳ ನೆರಳಕಟ್ಟೆ ಘಟಕದಿಂದ ಪಂಜಿನ ಮೆರವಣಿಗೆ, ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ನೇರಳಕಟ್ಟೆ ಘಟಕದ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ, ಸಭೆಯನ್ನು ನೇರಳಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು.

ನೇರಳಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಬಿಜ್ರಿ ರಾಜೀವ ಶೆಟ್ಟಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಆಜ್ರಿ ಮೂರ್ಕೈ ನಿಸರ್ಗ ಮಾರ್ಗವಾಗಿ ಪುನಃ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಹಿಂದಿರುಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಮಂದಿರ ಸಂಪರ್ಕ ಪ್ರಮುಖ್ ಪ್ರೇಮಾನಂದ ಶೆಟ್ಟಿ ಕಟ್ಕೇರಿ ಅವರು ದಿಕ್ಸೂಚಿ ಭಾಷಣ ಮಾಡಿದರು. ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡ ಅಧ್ಯಕ್ಷ ಶ್ರೀಧರ ಬಿಜೂರು ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ನಾಗರಾಜ ಬಾಳಿಗ, ಜಗದೀಶ್ ನಾಯಕ್ ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್ ನೇರಳಕಟ್ಟೆ ಘಟಕದ ಅಧ್ಯಕ್ಷ ನಾರಾಯಣ ಗಾಣಿಗ, ಭಜರಂಗದಳ ತಾಲೂಕು ಸಹ ಸಂಚಾಲಕ ಜಯರಾಮ್ ಎಮ್. ನೇರಳಕಟ್ಟೆ, ಗೌರವಾಧ್ಯಕ್ಷರಾದ ಕುಷ್ಠ ಪೂಜಾರಿ ಮೊದಲಾದವರು ವೇದಿಕೆಯಲ್ಲಿದ್ದರು.

Exit mobile version