Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ: ನಿವೇಶನ ರಹಿತರಿಂದ ಅರ್ಜಿ ಸ್ವೀಕಾರಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಮತ್ತು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ಜಂಟಿ ಆಶ್ರಯದಲ್ಲಿ ಉಪ್ಪುಂದ ಮತ್ತು ಬಿಜೂರು ಗ್ರಾಮಗಳ ಬಡನಿವೇಶನ ರಹಿತರಿಂದ – ನಿವೇಶನ ಸ್ಥಳ ಮಂಜೂರು ಮಾಡುವುದಕ್ಕೆ ಒತ್ತಾಯಿಸಿ ಸಾಮೂಹಿಕವಾಗಿ ಅರ್ಜಿ ಸ್ವೀಕಾರ ಕಾರ್ಯಕ್ರಮ ಕಾಸನಾಡಿ ಜಟ್ಟಿಗೇಶ್ವರ ದೈವಸ್ಥಾನದ ವಠಾರದಲ್ಲಿ ಜರಗಿತು.

ಉಪ್ಪುಂದ ಮತ್ತು ಬಿಜೂರು ಗ್ರಾಮಗಳ ಬಡನಿವೇಶನ ರಹಿತರಿಂದ ಅರ್ಜಿಗಳನ್ನು ಹೋರಾಟ ಸಮಿತಿಗಳ ಮುಖಂಡರಾದ ಮಾಧವ ದೇವಾಡಿಗ, ಶ್ರೀಧರ ಉಪ್ಪುಂದ ಇವರು ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಪ್ರಸ್ತಾವಿಕರಾಗಿ ಮಾತನಾಡುತ್ತಾ ಅರ್ಜಿದಾರರನ್ನು ಸ್ವಾಗತಿಸಿದರು. ಹೋರಾಟ ಸಮಿತಿಯ ಮುಖಂಡರಾದ ಚಂದ್ರ ಉಪ್ಪುಂದ, ಅಮ್ಮಯ್ಯ ಪೂಜಾರಿ ಬಿಜೂರು, ಮಂಜುನಾಥ ಶೇರುಗಾರ ಮುಡೂರ ಪೂಜಾರಿ, ಸತೀಶ ಬಿಜೂರು, ಬಾಬು ಕೆ. ದೇವಾಡಿಗ, ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ, ಗಣೇಶ ಮೊಗವೀರ, ಕುಶಲ ಮತ್ತು ಶ್ಯಾಮಲ ಉಪಸ್ಥಿತರಿದ್ದರು.

Exit mobile version