Kundapra.com ಕುಂದಾಪ್ರ ಡಾಟ್ ಕಾಂ

ಹಾಲಾಡಿ-76: ಕಿರುಕುಳಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪತಿ ಹಾಗೂ ಪತಿ ಮನೆಯವರ ನಿರಂತರ ಕಿರುಕುಳದಿಂದ ಬೇಸತ್ತ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ತಾಲೂಕಿನ ಹಾಲಾಡಿ-76 ತತ್ತೋಟ್ಟು ಎಂಬಲ್ಲಿ ನಡೆದಿದೆ. ರೇಖಾ(28) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಮನೆಯವರು ನಿರಂತರವಾಗಿ ಕಿರುಕುಳ ನೀಡುತ್ತಿದ್ದರಿಂದ ಮಾನಸಿಕವಾಗಿ ನೊಂದಿದ್ದ ಮಹಿಳೆ ಮನೆ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಗಂಡ, ಮಾವ, ಅತ್ತೆ, ಭಾವ, ಮೈದುನ ಮೇಲೆ ದೂರು ದಾಖಲಾಗಿದ್ದು, ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Exit mobile version