ಇವರು ಕಳೆದ ಬಾರಿ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಮೂರು ಪದಕ ಪಡೆದು ಫ್ರಾನ್ಸ್ ದೇಶದಲ್ಲಿ ಇದೇ ಅಗಸ್ಟ್ನಲ್ಲಿ ನಡೆಯುವ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ – 2015 ಕ್ಕೆ ಆಯ್ಕೆಯಾಗಿರುತ್ತಾರೆ.
ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಅಧೀಕ್ಷಕರ ಕಛೇರಿಯ ನಿಸ್ತಂತು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಇವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ಅಣ್ಣಾಮಲೈ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಂತೋಷ್ ಕುಮಾರ್ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಕೆ.ಎಂ ಚಂದ್ರಶೇಖರರವರು ಅಭಿನಂದಿಸಿರುತ್ತಾರೆ.