Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನ ವಸಂತ ವೇದಿಕ ಶಿಬಿರಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೋಟ: ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದಲ್ಲಿ ನಡೆಯಲಿರುವ ವಸಂತ ವೇದಿಕ ಶಿಬಿರಕ್ಕೆ ಚಾಲನೆ ನೀಡಲಾಯಿತು.

ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಸಂಯುಕ್ತ ಆಶ್ರಯದಲ್ಲಿ 20 ದಿನಗಳ ಕಾಲ ಈ ಶಿಬಿರ ನಡೆಯಲಿದೆ. ಆಡಳಿತ ಮಂಡಳಿ ಅಧ್ಯಕ್ಷ ಅನಂತಪದ್ಮನಾಭ ಅಡಿಗ ಕಾರ್ಯಕ್ರಮ ಉದ್ಘಾಟಿಸಿ, ಸುಮಾರು 20 ವರ್ಷದಿಂದ ಬೇಸಿಗೆ ರಜೆಯಲ್ಲಿ ವಿಪ್ರ ಬಾಂಧವರ ಮಕ್ಕಳಿಗಾಗಿ ಸಾಲಿಗ್ರಾಮದಲ್ಲಿ ಆಯೋಜಿಸುತ್ತಿರುವ ‘ವಸಂತ ವೇದ ಶಿಬಿರ’ ಪೂಜೆಯ ವಿಧಿ-ವಿಧಾನ, ವೈದಿಕ ಪದ್ಧತಿಯ ಆಚಾರ-ವಿಚಾರ ಮುಂತಾದ ಧಾರ್ಮಿಕ ಪ್ರಜ್ಞೆಯನ್ನು ಬೋಧಿಸುವಲ್ಲಿ ಯಶಸ್ವಿಯಾಗಿದೆ. ಈ ಬಾರಿ 20 ದಿನಗಳ ಕಾಲ ಸಂಪೂರ್ಣ ಉಚಿತವಾಗಿ ಶಿಬಿರ ನಡೆಯಲಿದೆ. ಗೋವಾ, ಮುಂಬೈ ಹಾಗೂ ಹೊರ ಜಿಲ್ಲೆಗಳ ಸಹಿತ 400 ವಿದ್ಯಾರ್ಥಿಗಳು ವಿದ್ಯಾರ್ಥಿಗಳಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.

ಆಡಳಿತ ಮಂಡಳಿ ಸದಸ್ಯ ಸದಾರಮ ಹೇರ್ಳೆ ಮಾತನಾಡಿ, ಮಕ್ಕಳಿಗೆ ಧಾರ್ಮಿಕತೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಶಿಬಿರ ಸಹಾಯಕವಾಗಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ-ಪ್ರವಚನಗಳನ್ನು ತಿಳಿಯಬೇಕು ಎಂದರು.

ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಕಾರ್ಯದರ್ಶಿ ರಾಮಕೃಷ್ಣ ಐತಾಳ, ಚಂದ್ರಶೇಖರ್ ಉಪಾಧ್ಯ, ಕೂಟ ಮಹಾಜಗತ್ತು ಸಾಲಿಗ್ರಾಮ ಘಟಕದ ಅಧ್ಯಕ್ಷ ಕೆ.ತಾರನಾಥ ಹೊಳ್ಳ, ಚಂದ್ರಶೇಖರ ಹೊಳ್ಳ ಉಪಸ್ಥಿತರಿದ್ದರು. ದೇವಸ್ಥಾನದ ಮ್ಯಾನೇಜರ್ ನಾಗರಾಜ್ ಹಂದೆ ಕಾರ್ಯಕ್ರಮ ನಿರೂಪಿಸಿದರು.

 

Exit mobile version