Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ರಾಮಚಂದ್ರ ಅಡಿಗರಿಗೆ ಗೌರವ ಡಾಕ್ಟರೇಟ್

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು: ಶ್ರೀ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಮತ್ತು ತಂತ್ರಿ ಕೆ. ರಾಮಚಂದ್ರ ಅಡಿಗ ಅವರಿಗೆ ನ್ಯಾಶನಲ್ ವರ್ಚುವಲ್ ಯುನಿವರ್ಸಿಟಿ ಫಾರ್ ಪೀಸ್ ಎಂಡ್ ಎಜ್ಯುಕೇಶನ್ ಸಂಸ್ಥೆಯು ಅಡಿಗರ ಸಾಮಾಜಿಕ ಬದ್ಧತೆ ಮತ್ತು ಕಳಕಳಿಯನ್ನು ಗುರುತಿಸಿ ಯುವಜನ ಸಬಲೀಕರಣ ವಿಭಾಗದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಈಚೆಗೆ ನಡೆದ ಪದವಿಪ್ರದಾನ ಸಮಾರಂಭದಲ್ಲಿ ವಿಜ್ಞಾನಿ ಡಾ. ಅಲೆಕ್ಸಾಂಡರ್ ಪದವಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಡಾ. ವಿಜಯ ಸರಸ್ವತಿ, ಜೆ. ಸುಂದರ ಸಿಂಗ್, ನಿವೃತ್ತ ನ್ಯಾಯಮೂರ್ತಿಗಳು, ವಿಜ್ಞಾನಿಗಳು ಉಪಸ್ಥಿತರಿದ್ದರು.

 

Exit mobile version