Kundapra.com ಕುಂದಾಪ್ರ ಡಾಟ್ ಕಾಂ

ಎಚ್.ಎಂ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರದಿನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಬಿ. ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷರಾಗಿರುವ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನುಆಚರಿಸಲಾಯಿತು.

ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಡೇರ ಹೋಬಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾಗಿರುವ ಶಂಕರ ಶೆಟ್ಟಿಯವರು ಮಾತನಾಡಿ ’ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಅದು ಕೇವಲ ಒಂದು ದಿನದ ಆಚರಣೆಯಾಗದೇ ನಿರಂತರವಾಗಿ ನಡೆಯಬೇಕು. ಗಿಡ ನೆಡುವುದು ಎಷ್ಟು ಮುಖ್ಯವೋ ಅದರ ಪಾಲನೆ ಕೂಡ ನಮ್ಮ ಜವಾಬ್ದಾರಿಯಾಗಬೇಕು’ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಉಪಪ್ರಾಂಶುಪಾಲರಾದ ಶುಭಾಕೆ.ಎನ್, ಮುಖ್ಯಶಿಕ್ಷಕ ಜಗದೀಶ್‌ಆಚಾರ್ ಸಾಸ್ತಾನ, ಶಿಕ್ಷಕಿ ಕವಿತಾ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಿಯಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Exit mobile version