Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ: ಇಲೆಕ್ಟ್ರಿಕಲ್ ಅಂಗಡಿಗೆ ತಗುಲಿ ಬೆಂಕಿ. ಲಕ್ಷಾಂತರ ರೂ. ನಷ್ಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ  ಶ್ರೀ ಆನೆಗಣಪತಿ ದೇವಸ್ಥಾನದ ಬಳಿ ಇರುವ ಶ್ರೀ ಆನೆಗಣಪತಿ ಇಲೆಕ್ಟ್ರಿಕಲ್ ಅಂಗಡಿಗೆ ಬೆಳಗಿನ ಜಾವ ಆಕಸ್ಮಕವಾಗಿ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ವರದಿಯಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಗೆ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ. ಇಲೆಕ್ಟ್ರಿಕಲ್ ಶಾಪ್‌ನಲ್ಲಿರುವ ವಸ್ತುಗಳ ಸಂಪೂರ್ಣ ಸುಟ್ಟು ಕರಕಲಾಗಿವೆ. ಪಕ್ಕದ ಅಂಗಡಿಗಳಿಗೂ ಬೆಂಕಿ ಆವರಿಸಿಕೊಳ್ಳುವುದರಲ್ಲಿತ್ತು. ಅಗ್ನಿಶಾಮಕದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ. ಘಟನೆಯ ನಿಖರ ಕಾರಣ ತನಿಕೆಯ ಬಳಿಕ ತಿಳಿದುಬರಲಿದೆ.

Exit mobile version