Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ : ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಕಲಿಕಾ ವರ್ಗ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣದಿಂದ ಪ್ರಾಕೃತಿಕ ವಿಕೋಪಗಳು ನಿವಾರಣೆಯಾಗಿ ಎಲ್ಲಡೆ ಸಮತೋಲನವುಂಟಾಗುತ್ತದೆ. ಮನುಷ್ಯ ಮನುಷ್ಯರ ನಡುವಿನ ಬಾಂಧವ್ಯ ವೃದ್ಧಿಯಾಗಿ ಮನೆಮನದಲ್ಲಿ ಶಾಂತಿ ದೊರೆಯುತ್ತದೆ ಆದುದರಿಂದ ವಿಶಿಷ್ಠ ಚೇತನವನ್ನು ನೀಡಬಲ್ಲ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರವನ್ನು ನಿತ್ಯ ಪಠಿಸೋಣ ಎಂದು ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಸಮಿತಿ ಪಶ್ಚಿಮ ಕರಾವಳಿಯ ಸಂಯೋಜಕ ಸಂತೋಷ ಕೋಣಿ ಹೇಳಿದರು

ಅವರು ಕುಂದಾಪುರದ ಶ್ರೀ ಬಗಳಾಂಬ ದೇವಸ್ಥಾನದಲ್ಲಿ ನಡೆದ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಕಲಿಕಾ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀ ಬಗಳಾಂಬ ದೇವಸ್ಥಾನದ ಉತ್ಸವ ಸಮಿತಿ ಗೌರವಾಧ್ಯಕ್ಷ ಸೀತಾರಾಮ ಹೇರಿಕುದ್ರು, ಅಧ್ಯಕ್ಷ ಪ್ರಕಾಶ್ ಕೆ.ಬಿ., ಪ್ರಧಾನ ಅರ್ಚಕ ಗಣಪತಿ ಸುವರ್ಣ, ಸ್ತೋತ್ರ ಪಠಣ ಸಮಿತಿಯ ರಶ್ಮಿರಾಜ್ ಇನ್ನಿತರರು ಉಪಸ್ಥಿತರಿದ್ದರು.ಶ್ರೀಧರ ಸುವರ್ಣ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

 

Exit mobile version