Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಲಕ್ಷ್ಮೀಂದ್ರ ತೀರ್ಥರ ಚಾತುರ್ಮಾಸ್ಯ: ಕಾರ್ಯಕ್ರಮದ ಯಶಸ್ವಿಗೆ ಗಾಣಿಗ ಸಮಾಜದ ವಾಗ್ದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವ್ಯಾಸರಾಜ ಮಹಾ ಸಂಸ್ಥಾನ ಪರಮ ಪೂಜ್ಯರಾದ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾದಂಗಳರವರ ಚಾತುರ್ಮಾಸ್ಯ ವೃತಾಚರಣೆ ಅಂಗವಾಗಿ ಕುಂದಾಪುರಕ್ಕೆ ಆಗಮಿಸಿದ ಈ ಸಂದರ್ಭದಲ್ಲಿ ಅವರಿಗೆ ಅತಿಥ್ಯ ನೀಡಿ ಚಾತುರ್ಮಾಸ್ಯದ ವಸ್ತ್ರಭಿಕ್ಷೆ ನೀಡಲಾಯಿತು.

ಈ ಚಾತುರ್ಮಾಸ್ಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡುದಾಗಿ ಗಾಣಿಗ ಸಮಾಜ ಭಾಂದವರ ಪರವಾಗಿ ವಾಗ್ದಾನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೊಗ್ಗ ಗಾಣಿಗ, ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ್, ಕೋಶಾಧಿಕಾರಿ ಪರಮೇಶ್ವರ್ ಜಿ.ಬಿ, ಶ್ರೀ ವ್ಯಾಸರಾಜ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಗಾಣಿಗ, ಕೋಶಾಧಿಕಾರಿ ಗಣಪಯ್ಯ ಗಾಣಿಗ, ಮಾಜಿ ಕೋಶಾಧಿಕಾರಿ ಶಂಕರನಾರಾಯಣ ಗಾಣಿಗ ಬೀಜಾಡಿ, ಸಮಾಜದ ಹಿರಿಯರಾದ ಸುಧೀರ್ ಪಂಡಿತ್, ಗೋಪಾಲ ಚೆಲ್ಲಿಮಕ್ಕಿ ಮತ್ತು ರಾಜ್ಯದ ಎಲ್ಲಾ ಭಾಗದ ಗಾಣಿಗ ಸಮಾಜದ ಅಧ್ಯಕ್ಷರು ಹಾಗೂ ಮುಖಂಡರು ಮತ್ತು ಗಾಣಿಗ ಸಮಾಜ ಬಾಂಧವರು ಉಪಸ್ಥಿತರಿದ್ದರು.

 

Exit mobile version