Kundapra.com ಕುಂದಾಪ್ರ ಡಾಟ್ ಕಾಂ

ಪರಿಸರ ರಕ್ಷಣೆಗೆ ಪ್ಲಾಸ್ಟಿಕ್ ಮಿತಬಳಕೆ ಅಗತ್ಯ: ಮುಖ್ಯಾಧಿಕಾರಿ ಗೋಪಾಲಕೃಷ್ಠ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ಯಾರೀಸ್ ಪದವಿ ಕಾಲೇಜು ಕೋಡಿ, ಕುಂದಾಪುರ ಇದರ ವಾಣಿಜ್ಯ ವಿಭಾಗದ ವತಿಯಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಠ ಶೆಟ್ಟಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬೀಡಲಾರದ ನಂಟಾಗಿದೆ, ಎಲ್ಲವೂ ಪ್ಲಾಸ್ಟಿಕ್ ಮಯಾವಾಗಿರುವ ಇಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಬಳಸುವದರ ಮೂಲಕ ಪರಸರವನ್ನು ಉಳಿಸುವ ಕೆಲಸವನ್ನು ಇಂದಿನ ಯುವ ಪೀಳಿಗೆ ಮುಂದಾಗಬೇಕು. ಪರಿಸರ ಉಳಿವಿಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಹೆಚ್ಚೆಚ್ಚು ಹಮ್ಮಿಕೊಳ್ಳಬೇಕೆಂದು ಹೇಳಿದರು.

ಅತಿಥಿ ಅಬ್ದುಲ್ ಕೋಟೆ, ಎಸ್.ಡಿ.ಎಂ.ಸಿ ಸದಸ್ಯ ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಶಾಲೆ ಕೋಡಿ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ ವಹಿಸಿ ಪ್ಲಾಸ್ಟಿಕ್ ಬ್ಯಾಗ್‌ನ ಬದಲಿಗೆ ಬಟ್ಟೆ ಬ್ಯಾಗನ್ನು ಉಪಯೋಗಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪ್ರೋ. ಮಾಲತಿ ವಾಣಿಜ್ಯ ವಿಭಾUದ ಮುಖ್ಯಸ್ಥೆ ವಾಣಿಜ್ಯ ಸಂಘದ ಧೇಯ್ಯೋದ್ದೇಶ ಹಾಗೂ ಶೈಕ್ಷಣಿಕ ವರ್ಷದ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಕು.ಭವ್ಯ, ತೃತೀಯ ಬಿ.ಕಾಂ ಸ್ವಾಗತಿಸಿ, ವಾಣಿಜ್ಯ ಸಂಘದ ಕಾರ್ಯದರ್ಶಿ ಮಹಮ್ಮದ್ ಮಝರ್ ವಂದಿಸಿ, ನುಸೈಬಾ ತೃತೀಯ ಬಿ.ಕಾಂ ಕಾರ್ಯಕ್ರಮ ನಿರೂಪಿಸಿದರು.

Exit mobile version