Kundapra.com ಕುಂದಾಪ್ರ ಡಾಟ್ ಕಾಂ

ತ್ರಾಸಿ: ಬಸ್ಸುಗಳೆರಡು ಮುಖಾಮುಖಿ ಡಿಕ್ಕಿ. ಹಲವರಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತ್ರಾಸಿ ಕಡಲ ತೀರದ ಬಳಿ ಇಂದು ಸಂಜೆ ಬಸ್ಸುಗಳೆರಡು ಮುಖಾಮುಖಿ ಡಿಕ್ಕಿಯಾಗಿದ್ದು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸುಗಳ ಮುಂಭಾಗ ಸಂಪೂರ್ಣ ನಜ್ಜುಗುಜಾಗಿದ್ದು, ಗಾಯಗೊಂಡ ಪ್ರಯಾಣಿಕರನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

7:30ರ ವೇಳೆ ಸಾಗರದಿಂದ ಭಟ್ಕಳದ ಮಾರ್ಗವಾಗಿ ಕುಂದಾಪುರಕ್ಕೆ ಬರುತ್ತಿದ್ದ ಶ್ರೀ ದುರ್ಗಾಂಬಾ ಬಸ್ಸು ಹಾಗೂ ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಗಣೇಶ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕಾಗಮಿಸಿದ ಗಂಗೊಳ್ಳಿ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಘಟನೆಯ ತನಿಕೆ ನಡೆಸುತ್ತಿದ್ದಾರೆ.

Exit mobile version