Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಡಿಡಿಯು-ಜಿಕೆವೈನಲ್ಲಿ ಅಂತ್ಯೋದಯ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಎಂ.ಬಿ. ಎಜುಕೇಷನ್ ಟ್ರಸ್ಟ್ ಮತ್ತು ಕ್ಯಾಡಮ್ಯಾಕ್ಷ ಸಂಸ್ಥೆ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಬೈಂದೂರು ಮತ್ತು ಉಪ್ಪುಂದದಲ್ಲಿ ನಡೆಯುತ್ತಿರುವ ಕೇಂದ್ರ ಸರಕಾರದ ದಿನ್ ದಯಾಳ ಕೌಶಲ್ಯಾಭಿವೃದ್ದಿ ಕೇಂದ್ರದಲ್ಲಿ ಅಂತ್ಯೋದಯ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಮಾಹದೇವ ಬಿಲ್ಲವ ಅವರು ಮಾತನಾಡಿ ಈ ಯೋಜನೆ ಗ್ರಾಮೀಣ ಭಾಗದ ನಿರುದ್ಯೋಗವನ್ನು ಹೋಗಲಾಡಿಸಲು ಸಹಾಕಾರಿಯಾಗಿದೆ ಎಂದರು.

ಯಡ್ತರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರುಕ್ಕಣ್ಣ ಗೌಡ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಮಣಿಕಂಠ ಸ್ವಾಗತಿಸಿದರು. ಹಾಗೂ ಭಾಸ್ಕರ ಬಿಲ್ಲವ ವಂದಿಸಿದರು.

Exit mobile version