ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಬಿಜೂರು ಸಾಲಿಮಕ್ಕಿಯ ಚಂದ್ರ ದೇವಾಡಿಗ ತೇರ್ಗಡೆಯಾಗಿದ್ದಾರೆ.
ಬಿಜೂರು ಸಾಲಿಮಕ್ಕಿಯವರಾದ ಚಂದ್ರ ದೇವಾಡಿಗ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲಿಮಕ್ಕಿ ಬಿಜೂರು, ಪ್ರೌಢ ಶಿಕ್ಷಣವನ್ನು ಸರಕಾರಿ ಜ್ಯೂನಿಯರ್ ಕಾಲೇಜು ಉಪ್ಪುಂದ ಹಾಗೂ ಪದವಿ ಶಿಕ್ಷಣವನ್ನು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮುಗಿಸಿದ್ದು, ಇದೀಗ ಯಾವುದೇ ಕೋಚಿಂಗ್ ಇಲ್ಲದೇ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಚಂದ್ರ ದೇವಾಡಿಗ ಅವರು ಸಾಲಿಮಕ್ಕಿ ಓಣಿಮನೆ ನಾರಾಯಣ ದೇವಾಡಿಗ ಹಾಗೂ ನಾಗಮ್ಮ ದಂಪತಿಯ ಪುತ್ರ.